Category Archives: ಕರ್ನಾಟಕ
ಈ ಬಾರಿಯ ಕಾವೇರಿ ವಿವಾದ ಕನ್ನಡಿಗರಿಗೆ ಕೊಡುತ್ತಿರುವ ಸಂದೇಶವೇನು?
ಕಾವೇರಿ ವಿವಾದ – ಕನ್ನಡಿಗರಿಗೆ ಕೊಡುತ್ತಿರುವ ಸಂದೇಶ ತಮಿಳುನಾಡಿನ ಜೊತೆಗಿನ ಕರ್ನಾಟಕದ ಕಾವೇರಿ ವಿವಾದ ನೂರು ವರುಶಗಳಿಗೂ ಮಿಗಿಲಾದದ್ದು. ಸ್ವಾತಂತ್ರ್ಯಕ್ಕೆ ಮುಂಚೆ ಬ್ರಿಟಿಷರ ಪ್ರಭಾವದಿಂದಲೂ, ಸ್ವಾತಂತ್ರ್ಯ ನಂತರ ದೆಹಲಿಯಲ್ಲಿ ತಮಿಳುನಾಡಿನ ಪ್ರಾದೇಶಿಕ ಪಕ್ಷಗಳಿಗಿದ್ದ ಪ್ರಭಾವದಿಂದಲೂ ನಿರಂತರವಾಗಿ ತಮಿಳುನಾಡು ತನ್ನನ್ನು ತಾನು ಶೋಷಿತರಂತೆಯೂ, ಕರ್ನಾಟಕವನ್ನು ಶೋಷಿಸುವವರಂತೆಯೂ ಬಿಂಬಿಸುತ್ತ ಕಾವೇರಿ ನೀರಿನ ಮೇಲೆ ಹಕ್ಕು ಸಾಧಿಸಿ, ಕರ್ನಾಟಕಕ್ಕೆ ಅನ್ಯಾಯ … ಓದನ್ನು ಮುಂದುವರೆಸಿ
ಜಿಎಸ್ಟಿ ಕುರಿತ ಹೊಗಳಿಕೆಗಳ ಮಹಾಪೂರದಲ್ಲಿ ಕೊಚ್ಚಿ ಹೋಯಿತೇ ರಾಜ್ಯಗಳ ಹಿತಾಸಕ್ತಿ?
ಕಳೆದ ಹದಿನೈದು ವರ್ಷಗಳಿಂದ ರಾಜ್ಯಗಳು ಮತ್ತು ಕೇಂದ್ರ ಸರ್ಕಾರದ ನಡುವೆ ನಿರಂತರ ಹಗ್ಗಜಗ್ಗಾಟಕ್ಕೆ ಕಾರಣವಾಗಿದ್ದ ಸರಕು ಮತ್ತು ಸೇವಾ ತೆರಿಗೆ ಕಾಯ್ದೆ(ಜಿ.ಎಸ್.ಟಿ)ಗೆ ಕಳೆದ ವಾರ ರಾಜ್ಯಸಭೆಯಲ್ಲಿ ಒಪ್ಪಿಗೆ ದೊರೆತಿದೆ. 1991ರಲ್ಲಿ ಅಂದಿನ ಪ್ರಧಾನಿ ಪಿ.ವಿ.ನರಸಿಂಹರಾವ್ ಅವರ ಮುಂದಾಳತ್ವದಲ್ಲಿ ಶುರುವಾದ ಆರ್ಥಿಕ ಸುಧಾರಣೆಯ ಪ್ರಕ್ರಿಯೆ ಈಗ ಇನ್ನೊಂದು ಹಂತ ತಲುಪಿದ್ದು, ಜಿ.ಎಸ್.ಟಿ ದೇಶದ ಜಿಡಿಪಿ ಬೆಳವಣಿಗೆಯನ್ನು ಒಂದರಿಂದ … ಓದನ್ನು ಮುಂದುವರೆಸಿ
ಕರ್ನಾಟಕದ ಬ್ಯಾಂಕುಗಳಲ್ಲಿ ಕನ್ನಡದ ಕತೆ ವ್ಯಥೆ
ಇತ್ತೀಚೆಗೆ ಕರ್ನಾಟಕದ ಬ್ಯಾಂಕುಗಳಲ್ಲಿ ಕನ್ನಡ ಮತ್ತು ಕನ್ನಡಿಗರು ಸಂಪೂರ್ಣವಾಗಿ ಕಡೆಗಣನೆಗೆ ಒಳಗಾಗುತ್ತಿರುವುದು ಹೆಚ್ಚುತ್ತಿದೆ. ಈ ಬಗ್ಗೆ ಸಾಮಾಜಿಕ ತಾಣಗಳ ಮೂಲಕ ನಮ್ಮ ಜನಪ್ರತಿನಿಧಿಗಳ ಗಮನ ಸೆಳೆಯುವ ಕೆಲಸ ಹಲವಾರು ಕನ್ನಡಿಗರು ಮಾಡುತ್ತಿದ್ದಾರೆ. ಈ ನಿಟ್ಟಿನಲ್ಲಿ ಸ್ಪಂದಿಸಿದ ಮೈಸೂರು-ಕೊಡಗು ಸಂಸದರಾದ ಪ್ರತಾಪ್ ಸಿಂಹ ಅವರು ಬ್ಯಾಂಕಿನಲ್ಲಿನ ಸಮಸ್ಯೆಗಳ ಬಗ್ಗೆ ಒಂದಿಷ್ಟು ವಿವರವಾದ ಮಾಹಿತಿಯನ್ನು ಕೋರಿದ್ದರು. ಅವರಿಗೆ ಕಳಿಸಲಾದ … ಓದನ್ನು ಮುಂದುವರೆಸಿ
ಇನ್ವೆಸ್ಟ್ ಕರ್ನಾಟಕ ಮತ್ತು ಕನ್ನಡಿಗರ ಹಿತ
ಇನ್ವೆಸ್ಟ್ ಕರ್ನಾಟಕ ಅನ್ನುವ ಹೆಸರಿನಲ್ಲಿ ಕರ್ನಾಟಕಕ್ಕೆ ಬಂಡವಾಳ ಹೂಡಿಕೆದಾರರನ್ನು ಸೆಳೆಯುವ ಪ್ರಯತ್ನ ಕರ್ನಾಟಕ ಸರ್ಕಾರ ಅತ್ಯಂತ ಪರಿಶ್ರಮದಿಂದ ಮಾಡುತ್ತಿದೆ. ಮೂರು ದಿನಗಳ ಕಾಲ ನಡೆಯುವ ಈ ಸಮಾವೇಶಕ್ಕೆ ಪ್ರಪಂಚದ ಹಲವು ದೇಶಗಳಿಂದ, ಹೊರ ರಾಜ್ಯಗಳಿಂದ ಹೂಡಿಕೆದಾರರನ್ನು ಸೆಳೆಯಲು ಬೃಹತ್ ಕೈಗಾರಿಕಾ ಸಚಿವ ಆರ್.ವಿ.ದೇಶಪಾಂಡೆಯವರು ಹಲವು ತಿಂಗಳುಗಳಿಂದ ಕೆಲಸ ಮಾಡುತ್ತಿರುವುದು ಎಲ್ಲರೂ ಬಲ್ಲರು. ಇವರ ಪ್ರಯತ್ನಕ್ಕೆ ಮುಖ್ಯಮಂತ್ರಿ … ಓದನ್ನು ಮುಂದುವರೆಸಿ
“ಕನ್ನಡ ಜಗತ್ತು” ಪುಸ್ತಕದ ಬಗ್ಗೆ ವೈ.ಎಸ್.ವಿ ದತ್ತಾ ಅವರ ಅನಿಸಿಕೆಗಳು
ಡಿಸೆಂಬರ್ 12, ಶನಿವಾರ ಬನವಾಸಿ ಬಳಗ ಪ್ರಕಾಶನದಿಂದ ನನ್ನ “ಕನ್ನಡ ಜಗತ್ತು” ಪುಸ್ತಕ ಬಿಡುಗಡೆಯಾಯಿತು. ಈ ಕಾರ್ಯಕ್ರಮದ ಅತಿಥಿಗಳಲ್ಲಿ ಒಬ್ಬರಾಗಿದ್ದ ಶಾಸಕರು, ಜಾತ್ಯಾತೀತ ಜನತಾದಳದ ಹಿರಿಯ ನಾಯಕರು ಆದ ವೈ.ಎಸ್.ವಿ ದತ್ತಾ ಅವರು ಕಾರಣಾಂತರಗಳಿಂದ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಆಗದ ಕಾರಣ ಪುಸ್ತಕದ ಬಗೆಗಿನ ತಮ್ಮ ಅನಿಸಿಕೆಯನ್ನು ಪತ್ರದ ಮೂಲಕ ಬರೆದು ಕಳಿಸಿದ್ದರು. ಆ ಪತ್ರದಲ್ಲಿ ಕರ್ನಾಟಕದ, … ಓದನ್ನು ಮುಂದುವರೆಸಿ
ಈಗಿರುವ ಸ್ವರೂಪದಲ್ಲಿ ಭಾರತ ಸ್ವಚ್ಛವಾಗುವುದಿಲ್ಲ. ಯಾಕೆ ಅಂತೀರಾ?
ಕಳೆದ ವರ್ಷ ಗಾಂಧಿಜಿಯವರ ಹುಟ್ಟು ಹಬ್ಬದ ದಿನ ಬಹಳ ಸದ್ದುಗದ್ದಲದೊಂದಿಗೆ ಜಾರಿಯಾದ ಪ್ರಧಾನಿ ಮೋದಿಯವರ ಕನಸಿನ ಯೋಜನೆ ಸ್ವಚ್ಛ ಭಾರತ ಅಭಿಯಾನ. ಶುರುವಾದ ಮೊದಲ ಕೆಲ ತಿಂಗಳು ಜನಪ್ರಿಯ ನಟರು, ಪ್ರಭಾವಿಗಳು ಈ ಯೋಜನೆಯ ರಾಯಭಾರಿಗಳಾಗಿ ಪೊರಕೆ ಹಿಡಿದು ನಿಂತಾಗ ಈ ಯೋಜನೆಯ ಬಗ್ಗೆ ಒಂದಿಷ್ಟು ಸುದ್ದಿಯಾಯಿತು. ಯೋಜನೆ ಜಾರಿಯಾದ ಕಳೆದ ಒಂದು ವರ್ಷದ ಅವಧಿಯಲ್ಲಿ … ಓದನ್ನು ಮುಂದುವರೆಸಿ
ಕನ್ನಡದ ಸ್ಥಿತಿಗತಿ – ಹತಾಶೆಯ ನಡುವೆಯೂ ಹೊಸ ಭರವಸೆ
ಕರ್ನಾಟಕ ಒಂದಾದ ದಿನ ಮತ್ತೆ ಬಂದಿದೆ. ಇಡೀ ನವೆಂಬರ್ ತಿಂಗಳು ರಾಜ್ಯೋತ್ಸವದ ಅಬ್ಬರದ ನಡುವೆ ಕನ್ನಡದ ದುಸ್ಥಿತಿಯ ಬಗ್ಗೆ ಆತಂಕದ ಚರ್ಚೆಗಳೂ ಏರ್ಪಡುತ್ತವೆ. ಈ ಎಲ್ಲ ಚಿಂತೆಗಳ ನಡುವೆಯೇ ಕಳೆದ ಹತ್ತು ವರ್ಷಗಳಲ್ಲಿ ಕನ್ನಡದ ಬೇರು ಬಲವಾಗುತ್ತಿರುವ ಬಗ್ಗೆ ಹಲವು ಧನಾತ್ಮಕ ಬದಲಾವಣೆಗಳನ್ನು ಗಮನಿಸಬಹುದು. ಅವು ಕನ್ನಡದ ಬಗೆಗಿನ ನಮ್ಮ ಆತಂಕಗಳನ್ನು ಸಾಕಷ್ಟು ಕಡಿಮೆ ಮಾಡುವಂತದ್ದು. … ಓದನ್ನು ಮುಂದುವರೆಸಿ
ಕಳಸಾ ಬಂಡೂರಿ ಯೋಜನೆಯ ಸಮಗ್ರ ಇತಿಹಾಸ
ಕಳಸಾ ಬಂಡೂರಿ ಯೋಜನೆಕಳಸಾ ಬಂಡೂರಿ ಯೋಜನೆ ಜಾರಿಗಾಗಿ ಕನ್ನಡಿಗರ ಹೋರಾಟ ತೀವ್ರಗೊಂಡಿದೆ. ಈ ಹೊತ್ತಿನಲ್ಲಿ ಈ ಯೋಜನೆಯ ಸಮಗ್ರ ವಿವರವನ್ನು ಒಂದೆಡೆ ಕಲೆ ಹಾಕಿದ್ದಾರೆ ಕನ್ನಡದ ಯುವ ಬರಹಗಾರ ಮಹೇಶ್ ರುದ್ರಗೌಡರ್ ಅವರು. ಅವರು ಇದನ್ನು ಎರಡು ವರ್ಷದ ಹಿಂದೆಯೇ ಮಾಡಿದ್ದರು. ವಿವಾದ ಭುಗಿಲೇದ್ದಿರುವ ಈ ಹೊತ್ತಿನಲ್ಲಿ ಸದ್ಯದ ಪರಿಸ್ಥಿತಿಯನ್ನು ಸೇರಿಸಿ ಒಂದು ಸಮಗ್ರ ಚಿತ್ರಣವನ್ನು … ಓದನ್ನು ಮುಂದುವರೆಸಿ
ಚಳಿಗಾಲದ ಅಧಿವೇಶನ ಮತ್ತು ಉತ್ತರ ಕರ್ನಾಟಕದ ಸಮಸ್ಯೆಗಳ ಮೂಲ
ಬೆಳಗಾವಿ ಮತ್ತು ಬೆಂಗಳೂರಿನಲ್ಲಿ ವಿಧಾನಸಭೆಯ ಚಳಿಗಾಲದ ಅಧಿವೇಶನ ಜರುಗಿದೆ. ಕಬ್ಬಿನ ಬೆಳೆಗಾರರ ಸಮಸ್ಯೆ, ಲೋಕಾಯುಕ್ತರ ಭ್ರಷ್ಟಾಚಾರದ ಪ್ರಕರಣ, ರೈತರ ಆತ್ಮಹತ್ಯೆಯಂತಹ ವಿಷಯಗಳು ಅಧಿವೇಶನದಲ್ಲಿ ಹೆಚ್ಚಿನ ಚರ್ಚೆಗೊಳಗಾದವು. ಜೊತೆಯಲ್ಲೇ, ಶಾಸಕ ನಡಹಳ್ಳಿಯವರು ಉತ್ತರ ಕರ್ನಾಟಕ ಪ್ರತ್ಯೇಕತೆ ಹೋರಾಟದ ಪರ ದನಿ ಎತ್ತಿದ್ದ ಹೊತ್ತಿನಲ್ಲೇ ನಡೆದ ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆಗಳ ಬಗೆಗಿನ ಚರ್ಚೆ ಹೇಗಿತ್ತು, ಚರ್ಚೆಗಳಲ್ಲಿ ಏನಾಯಿತು … ಓದನ್ನು ಮುಂದುವರೆಸಿ
ನಡಹಳ್ಳಿ ಪಾದಯಾತ್ರೆ – ದಕ್ಷಿಣ ಕರ್ನಾಟಕ ಅನ್ನುವ ಇಲ್ಲದ ಶತ್ರುವನ್ನು ಹುಟ್ಟು ಹಾಕುವ ಯತ್ನ
ಉತ್ತರ ಕರ್ನಾಟಕವನ್ನು ಪ್ರತ್ಯೇಕ ರಾಜ್ಯ ಮಾಡಿ, ಅದರ ಮೊದಲ ಮುಖ್ಯಮಂತ್ರಿಯಾಗಬೇಕು ಅನ್ನುವ ಕನಸು ಹೊತ್ತಂತೆ ಕಾಣುತ್ತಿರುವ ನಡಹಳ್ಳಿಯವರು ಇತ್ತೀಚೆಗೆ ವಿಜಯಪುರದಿಂದ ರಾಯಚೂರಿನವರೆಗೆ ಪಾದಯಾತ್ರೆಯೊಂದನ್ನು ಹಮ್ಮಿಕೊಂಡಿದ್ದರು. ಈ ಪಾದಯಾತ್ರೆಯ ಗುರಿ ನಂಜುಂಡಪ್ಪ ವರದಿಯ ಅನುಷ್ಟಾನಕ್ಕೆ ಒತ್ತಾಯ ತರುವುದು ಎಂದು ಹೇಳಲಾಗಿದ್ದರೂ ಪ್ರತ್ಯೇಕ ಉತ್ತರ ಕರ್ನಾಟಕದ ಬಾವುಟ, ನಕ್ಷೆ ಸಿದ್ದಪಡಿಸಿಕೊಂಡು ಹಾದಿಯುದ್ದಕ್ಕೂ ದಕ್ಷಿಣ ಕರ್ನಾಟಕವನ್ನು ದೂರುತ್ತ ಸಾಗಿದ ರೀತಿ … ಓದನ್ನು ಮುಂದುವರೆಸಿ